ಕೊಟ್ಟೂರು :ಹದಿನೇಳು ವರ್ಷಗಳ ನಂತರ ಚಿರಿಬಿ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯುವುದೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಜಾತ್ರೆಯ ಪ್ರಯುಕ್ತ ಚಿರಿಬಿ ಗ್ರಾಮಸ್ಥರ ಸಭೆಯನ್ನು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಈ ಸಭೆಯಲ್ಲಿ ಚಿರಿಬಿ ಗ್ರಾಮಸ್ಥರು ಹಾಜರಾಗಿ, ಮೂಗಬಸವೇಶ್ವರ ದೇವಸ್ಥಾನವು ಚಿರಿಬಿ ಗ್ರಾಮಕ್ಕೆ ಸೇರಿದ್ದೆಂದು ಇತಿಹಾಸದ ದಾಖಲೆಗಳನ್ನು ಮತ್ತು ಜರ್ಮಲಿಯ ಪಾಳೆಗಾರರಾದ ಇಮ್ಮಡಿ ಸಿದ್ದಪ್ಪನಾಯಕ ಈ ದೇವಸ್ಥಾನಕ್ಕೆ ಭೂ ದಾನ ನೀಡಿ, ಮೂಗಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾರಣಕರ್ತರಾಗಿದ್ದಾರೆ. ಆಗ ಕಂದಾಯ ಜಮೀನು ರಾಂಪುರ ಎಂದು ಇದ್ದುದ್ದಕ್ಕೆ ಅದನ್ನು ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ, ರಾಂಪುರ ಎಂದು ಕರೆಯುತ್ತಿರುವುದಕ್ಕೆ ನಮ್ಮ ತಕರಾರಿದೆ. ಅಲ್ಲದೆ ರಥೋತ್ಸವದ ಬ್ಯಾನರ್ಗಳಲ್ಲಿಯೂ ಸಹ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ, ರಾಂಪುರ ಎಂದು ಹಾಕಿರುವುದಕ್ಕಷ್ಟೇ ನಮ್ಮ ತಕರಾರು ಎಂದರು. ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವಿಚಾರಿಸಿದರೆ, ಡಿ.ಸಿ.ಯವರನ್ನು ಕೇಳಿ, ಎ.ಸಿ.ಯವರನ್ನು ಕೇಳಿ ಎಂಬ ಉಡಾಫೆಯ ಮಾತುಗಳನ್ನು ಚಿರಿಬಿ ಗ್ರಾಮದ ಮುಖಂಡರಿಗೆ ಹೇಳಿದ್ದು, ಈ ಸಭೆ ನಡೆಯಲು ಕಾರಣಕರ್ತರಾಗಿದ್ದಾರೆ ಎಂದರು. ಎರಡು ಗ್ರಾಮಗಳ ಈ ಗೊಂದಲಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಇ.ಒ. ಹನುಮಂತಪ್ಪರವರೇ ಕಾರಣ ಎಂದರು. ...
ಕೊಟ್ಟೂರು : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂರಾರು ಬಡ ರೋಗಿಗಳು ತಮ್ಮ ಆರೋಗ್ಯವನ್ನು ತೋರಿಸಿಕೊಳ್ಳಲು ಪ್ರತಿನಿತ್ಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಆಸ್ಪತ್ರೆಯಲ್ಲಿ ಇರುವ ಸಿಬ್ಬಂದಿ ಕಿರಣ್ ಕುಮಾರ್ ರೋಗಿಗಳ ಮೇಲೆ ಗದರಿಸುವುದು ಬೈಯುವುದು ಮತ್ತು ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಬಂದರೆ ಯಾವುದೇ ರೀತಿ ಸ್ಪಂದಿಸುವುದಿಲ್ಲ ಎಂದು ಸಾರ್ವಜನಿಕರು ಆತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರದಂದು ಒಬ್ಬ ರೋಗಿಯು ತಮ್ಮ ಆರೋಗ್ಯ ತೋರಿಸಿಕೊಳ್ಳಲು ಆಸ್ಪತ್ರೆಗೆ ಬರುತ್ತಾರೆ ವೈದ್ಯರು ಬಿಪಿಯನ್ನು ಚೆಕ್ ಮಾಡಿಸುವಂತೆ ಹೇಳುತ್ತಾರೆ ಡಿಪಿ ಚೆಕ್ ಮಾಡಿಸಿಕೊಳ್ಳಲು ಸಿಬ್ಬಂದಿ ಕಿರಣ್ ಕುಮಾರ್ ಬಳಿ ಬಂದರೆ ನಾನು ಬಿಪಿ ಚೆಕ್ ಮಾಡುವುದಿಲ್ಲ ಯಾರಿಗೆ ಬೇಕಾದರೂ ಹೇಳಿ ನಾನು ಬಿಪಿ ಚೆಕ್ ಮಾಡುವುದಿಲ್ಲ ಎಂದು ಅಸಡ್ಯ ಉತ್ತರವನ್ನು ನೀಡುವುದಲ್ಲದೆ ಯಾವ ಅಧಿಕಾರಿಗಳಿಗಾದರೂ ಫೋನ್ ಮಾಡಿ ನಾನು ಮಾಡುವುದಿಲ್ಲ ಎಂದು ಹೇಳುತ್ತಾರೆ. ಸಿಬ್ಬಂದಿ ಕಿರಣ್ ಕುಮಾರ್ ಅವರ ವರ್ತನೆ ನೋಡಿ ನೋಡಿ ಸಾರ್ವಜನಿಕರು ಹಾಗೂ ರೋಗಿಗಳು ಅರೆ ಹುಚ್ಚನಂತೆ ಮಾತನಾಡುತ್ತಿದ್ದಾರೆ ಎಂದು ಕೂಡಲೇ ಮೇಲಾಧಿಕಾರಿಗಳು ಈತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಮತ್ತು ಡಿಎಸ್ಎಸ್ ಸಂಘಟನೆಗಳು ಆಗ್ರಿಸಿದರು. ಕೋಟ್ -1 ಕಿರಣ್ ಕುಮಾರ್ ರವರು ಅನಾರೋಗ್ಯ ರೋಗಿಗಳ ಮೇಲೆ ಗದರಿ...
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ ನಗರ 14ನೇ ವಾರ್ಡಿನಲ್ಲಿ ತಳವಾರ ದುರುಗಪ್ಪ ಇವರು ವಾಸವಿದ್ದು (60), ಇಂದು (ಆಗಸ್ಟ್ 19) ಬೆಳಿಗಿನ ಜಾವಾ 5.40ಗಂಟೆಗೆ ಅನಾರೋಗ್ಯ ನಿಮಿತ ಹೊಸಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಕೆಲವೇ ದಿನಗಳಲ್ಲಿ ಅನಾರೋಗ್ಯ ದಿಂದ ಬಳಲುತ್ತಿದ್ದು ಚಿಕಿಸ್ಥೆ ಫಲಕರಿಯಾಗದೆ ನಿಧನ ಹೊಂದಿದ್ದಾರೆ, ಮೃತರು ಇವರ ಕುಟುಂಬದಲ್ಲಿ 3 ಜನ ಗಂಡು ಹಾಗೂ 3 ಹೆಣ್ಣುಮಕ್ಕಳು ಇದ್ದು ಮೃತ ತಳವಾರ ದುರುಗಪ್ಪನಿಗೆ ಹಾಗೂ ಮೊಮ್ಮಕ್ಕಳಿದ್ದು ತುಂಬು ಕುಟುಂಬವನ್ನು , ಹೊಂದಿದವರಾಗಿದ್ದರು. *ಅಂತ್ಯಕ್ರಿಯೆ*-ಆಗಸ್ಟ್ 19 ರಂದು ಮದ್ಯಾಹ್ನ 1.30 ಗಂಟೆಗೆ , ಪಟ್ಟಣದ 16 ನೇ ವಾರ್ಡಿನ ರಾಜೀವ್ ಗಾಂಧಿ ನಗರ ಪಕ್ಕದಲ್ಲಿ ಬರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. *ಸಂತಾಪ*- ತಂಗಿಯರು ತಮ್ಮ ಹಾಗೂ ಅಣ್ಣಂದಿರು ಹಾಗೂ ಅಪಾರ ಕುಟುಂಬ ಬಂಧು ಬಳಗದವರು ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ನಗರದ ಹಿರಿಯರು ಅಗಲಿಕೆಯಿಂದಾಗಿ , ಅವರ ಕುಟುಂಬದಲ್ಲಿ ದುಖಃ ಮಡುವುಗಟ್ಟಿದೆ ಸೂಚಕದ ಛಾಯೆ ಆವರಿಸಿದೆ. ಸಮಸ್ತ ಬಂಧುಗಳು , ದುಖಃತಪ್ತರಾಗಿದ್ದಾರೆ. ಮಾದಿಗ ಸಮುದಾಯದವರು ಸೇರಿದಂತೆ. ವಿವಿದ ಸಮುದಾಯದವರು. ಕೂಡ್ಲಿಗಿ ಅಂಬೇಡ್ಕರ ನಗರ ಸಮಸ್ತ ಗ್ರಾಮಸ್ಥರು. ಕ್ಷೇತ್ರದ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು. ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರು ಸರ್ವ ಸದಸ್ಯರು...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ