ಕಾನ ಹೊಸಹಳ್ಳಿ: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆಯನ್ನ ಸರಳವಾಗಿ ಆಚರಣೆ ಮಾಡಲಾಯಿತು. ಇಲ್ಲಿನ ನಾಡ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ಉಳುವವನೆ ಭೂಮಿ ಒಡಯ ಕಾಯ್ದೆಯ ಅನುಷ್ಠಾನ ಹಾಗೂ ಎಲ್.ಜಿ.ಹಾವನೂರು ವರದಿಯನ್ನು ಜಾರಿ ಮಾಡುವುದರ ಮೂಲಕ ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರೆನಿಸಿಕೊಂಡರು ಎಂದು ಕಂದಾಯ ಪರಿವೀಕ್ಷಕ ತಿಪ್ಪೇಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಾದ ಚನ್ನಬಸಯ್ಯ, ಶ್ರೀನಿವಾಸ ಕೊಂಡಿ ಮತ್ತು ಗ್ರಾಮದ ಮುಖಂಡರಾದ ನಾಗರಾಜ್. ಹನುಮಂತಪ್ಪ ಸೇರಿದಂತೆ ಇತರರು ಸಾರ್ವಜನಿಕ ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ