ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ರಾಯಚೂರು ಅ 19:- ತಾಲೂಕಿನ ಶಕ್ತಿನಗರ ಆರ್ ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವಾಗಿರುವ ಘಟನೆ ನಡೆದಿದೆ. ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿರುವ ಆರ್ ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಮಿಕ ನಿಂಗಪ್ಪ(45)ಮೃತ ಯುನಿಟ್ 4ನ ಇಎಸ್ ಪಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.
ಘಟಕದಲ್ಲಿ ಇಂದು 11 :00 ರ ಸುಮಾರು ಬೆಳಿಗ್ಗೆ ನಿಂಗಪ್ಪ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿದೆ. ಘಟನೆಯಲ್ಲಿ ಸ್ಥಳದಲ್ಲೇ ನಿಂಗಪ್ಪ ಮೃತಪಟ್ಟಿದ್ದು, ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ