ನಾಗರ ಪಂಚಮಿ, ಶ್ರದ್ದಾ ಭಕ್ತಿಯಿಂದ ಪೂಜೆ

 

 ಮಸ್ಕಿ: ಪಟ್ಟಣದ 4ನೇ ವಾರ್ಡ್ ನ ಆಂಜನೇಯ ದೇವಸ್ಥಾನದ ಬಳಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಭಾನುವಾರ ಬೆಳಿಗ್ಗೆಯಿಂದಲೇ ಜನರು ನಾಗರ ಮೂರ್ತಿಗೆ ಹಾಲೆರೆದು ಪೂಜೆ ಸಲ್ಲಿಸಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು.


ಮುದುಗಲ್ ಕ್ರಾಸ್ ಬಳಿಯ ಆಂಜನೇಯ ದೇವಸ್ಥಾನದ ಬಳಿ ನಾಗರ ಪಂಚಮಿಯ ದಿನದಂದು ನಾಗ ದೇವರನ್ನು ಪೂಜಿಸುವುದರಿಂದ ಕಾಳಸರ್ಪ

ದೋಷಗಳಿಂದ ಮುಕ್ತಿ ದೊರೆಯುತ್ತದೆ. ಸರ್ಪ ದೇವರನ್ನು ಮನೆಯ ರಕ್ಷಕ ಎಂಬ ಪ್ರತೀತಿ ಇದೆ. ಪಂಚಮಿ ದಿನ ನಾಗ ದೇವರನ್ನು ಪೂಜಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಅದೇ ಸಮಯದಲ್ಲಿ, ನಿಯಮಗಳು ಮತ್ತು ವಿಧಿವಿಧಾನಗಳ ಮೂಲಕ ಪೂಜೆ ಕೈಂಕರ್ಯಗಳನ್ನು - ಮಾಡುವುದರಿಂದ, ಮಹಾದೇವನು ಪ್ರಸನ್ನನಾಗುತ್ತಾನೆ ಎಂಬ ನಂಬಿಕೆ ಇದೆ. ಇದೇ ಕಾರಣಕ್ಕೆ ಪ್ರತೀ ವರ್ಷವೂ ಶ್ರಾವಣ ಮಾಸದ ಸಂದರ್ಭದಲ್ಲಿ ನಾಗರ ಹುತ್ತಕ್ಕೆ ಅಥವಾ ನಾಗರ ಮೂರ್ತಿಗೆ ಶ್ರದ್ದಾ ಭಕ್ತಿಯಿಂದ ಹಾಲೆರೆದು ಪೂಜೆ ಸಲ್ಲಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*