ರಾಷ್ಟ್ರೀಯ ಕಾಲುಬಾಯಿ ಲಸಿಕೆ ಅಭಿಯಾನ
ಕೊಟ್ಟೂರು ತಾಲ್ಲೂಕಿನಲ್ಲಿ ಪಶು ಸಂಗೋಪನ ಇಲಾಖೆಯಿಂದ ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು,
ಉಜ್ಜಿನಿ ಸಮೀಪದ ನಿಂಬಳಗೆರೆ, ಗಾಣಗಟ್ಟೆ, ಯರ್ರಮನಹಳ್ಳಿ, ಮಂಗಾಪುರ , ಶಾಂತನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 3125ಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಲಾಯಿತು.
ಪಶು ವೈದ್ಯಾಧಿಕಾರಿ ಡಾ. ಕೆ.ವಿ. ಕೊಟ್ರೇಶ್, ಪಶು ಪರೀಕ್ಷಕ ರಾಜ ಸಾಬ್, ಬಸವರಾಜ, ಆಶೋಕ, ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ