ಬಿರು ಬಿಸಿಲು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

"ಅಕ್ಷತದಿಗಿ ಅಮವಾಸೆ ನಿಮಿತ್ತ ಭಕ್ತರ ದಂಡು"

ಕೊಟ್ಟೂರು: ಪಟ್ಟಣದ ಆರಾಧ್ಯ ದೇವರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನಕ್ಕೆ  ಅಕ್ಷತದಿಗಿ  ಅಮವಾಸ್ಯೆ ನಿಮಿತ್ತ ಬುಧವಾರ ಭಕ್ತರು ದಂಡು ದಂಡಾಗಿ ಆಗಮಿಸಿ, ಬಿರು ಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ಭಕ್ತರು ಸ್ವಾಮಿಯ ದರ್ಶನ ಪಡೆಯಲು ಆಗಮಿಸಿದರು.

ಅಮವಾಸ್ಯೆ ಪ್ರಯುಕ್ತ ದೇವಸ್ಥಾನದಲ್ಲಿ ಬೆಳಗ್ಗೆಯಿಂದ  ಹಿರೇಮಠ ದಲ್ಲಿ  ಸ್ವಾಮಿಗೆ ರುದ್ರಾಭಿಷೇಕ ಮಹಾಭಿಷೇಕ ಸೇರಿದಂತೆ ವಿವಿಧಪೂಜಾ ಕೈಂಕಾರ್ಯಗಳು ನೆರವೇರಿದವು. ಪೂಜೆಗಳಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ಬುಧವಾರ ಅಮವಾಸ್ಯೆ ದಿನ ತಾಲೂಕು ಸೇರಿದಂತೆ ಜಿಲ್ಲೆಯಲ್ಲದೆ, ಅನ್ಯ ಜಿಲ್ಲೆಗಳಿಂದ ಭಕ್ತರು ಆಗಮಿಸಿ ದೇವಸ್ಥಾನದ ಸ್ವಾಮಿಯ ದರ್ಶನ ಪಡೆದರು.

ದೇವಸ್ಥಾನಕ್ಕೆ ಹೋಗುವ ಬಲಭಾಗದಲ್ಲಿ  200 ಮೀಟರ್  ಹಳೆ ಪಟ್ಟಣ ಪಂಚಾಯಿತಿ ವರೆಗೂ ಸರತಿಯಲ್ಲಿ  ನಿಂತ ಭಕ್ತರಿಗೆ ನೆರಳಿನ ವಿಷಯವಾಗಿ ಎರಡೂ ಬದಿಗಳಲ್ಲಿ ಶಾಮಿಯಾನ ವ್ಯವಸ್ಥೆಯನ್ನು ದೇವಸ್ಥಾನದ ದತ್ತಿ ಇಲಾಖೆ ಯವರು ಮಾಡಲಾಗಿತ್ತು.

ದರ್ಶನದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀ ಸ್ವಾಮಿಯ ಪ್ರಸಾದ ಸ್ವೀಕರಿಸಿ ಭಕ್ತಿಯಿಂದ ನಮಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*