ಕೊಟ್ಟೂರು ನೇಕಾರರ ಸಹಕಾರ ಮತ್ತು ಮಾರಾಟ ಸಂಘಕ್ಕೆ ಅಧ್ಯಕ್ಷರಾಗಿ ವಕೀಲರು ಬಾವಿಕಟ್ಟಿ ಶಿವಾನಂದ ಆಯ್ಕೆ

*ಉಪಾಧ್ಯಕ್ಷರಾಗಿ ತೋಟದ ಹನುಮಂತಪ್ಪ ಅವಿರೋಧ ಆಯ್ಕೆ

ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘಕ್ಕೆ ನಿರ್ದೇಶಕರಾಗಿ  ವಿ ಎಸ್ ಕೊಟ್ರೇಶ್,ರಾಂಪುರ ಬಸವರಾಜ, ದೇವರೆಡ್ಡಿ ವೆಂಕಟೇಶ್ , ಗಂಜಿ ದಿನೇಶ,  ಪಟ್ಟಶಾಲಿ ನಿಂಗರಾಜ, ತೂಲಹಳ್ಳಿ ಬೊಮ್ಮಪ್ಪ,ಕಾಸಲ ಕೊಟ್ರೇಶ್ , ವಿ ಶಿವರಾಜ್, ಪದ್ಮಾವತಿ ಆರ್ ,ಬಿ. ಸುನಂದಾ, ಅವಿರೋಧವಾಗಿ ಆಯ್ಕೆಯಾಗಿದ್ದು. ಅಧಿಕಾರಾವಧಿ ಐದು ವರ್ಷದ ವರೆಗೆ ಇರಲಿದೆ ಎಂದು ಚುನಾವಣಾಧಿಕಾರಿ ಎಚ್.ಸುರೇಶ ಪ್ರಮಾಣ ಪತ್ರ ನೀಡಿ ಪ್ರಕಟಿಸಿದರು. 

ನಂತರ ನೂತನ ಅಧ್ಯಕ್ಷರಾದ ಬಾವಿಕಟ್ಟಿ ಶಿವಾನಂದ ಮಾತನಾಡಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ನೇಕಾರರ ಸಹಕಾರ ಉತ್ಪಾದನೆ ಮತ್ತು ಮಾರಾಟ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ್, ಪ್ರಮುಖರಾದ ಬಾಚಿನಳ್ಳಿ ಗುರುಬಸವರಾಜ್, ಭಾವಿಕಟ್ಟಿ ಗುರುಬಸಪ್ಪ, ಬಾರಿಕರ ಮರಿಗೋಣಪ್ಪ, ಜವಳಿ ರಾಜಣ್ಣ, ಶಿವಕುಮಾರ್, ಲಾರಿ ಗುರುಬಸವರಾಜ್ ಹಾಗೂ ಸಂಘದ ಕಾರ್ಯದರ್ಶಿ ಹರೀಶ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*