ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಮಸ್ಕಿ ಪಟ್ಟಣದಲ್ಲಿ ವಿಜಯೋತ್ಸವ ಆಚರಣೆ
ಮಸ್ಕಿ : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಯು 27 ವರ್ಷದ ಬಳಿಕ ದೆಹಲಿಯಲ್ಲಿ ಬಹುಮತದಿಂದ 45ಕ್ಕೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೆ ಏರುವ ಹಿನ್ನೆಲೆಯಲ್ಲಿ ಶನಿವಾರ ಮಸ್ಕಿ ಬಿಜೆಪಿ ಮಂಡಲ ವತಿಯಿಂದ ಪಟ್ಟಣದ ದೈವದ ಕಟ್ಟೆ ಹತ್ತಿರ ಪಟಾಕಿ ಸಿಡಿಸಿ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಣೆ ಮಾಡಿದರು.
ಈ ವೇಳೆಯಲ್ಲಿ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ, ಪುರಸಭೆ ಸದಸ್ಯರಾದ ಸುರೇಶ ಹರಸೂರು,ಶಿವರಾಜ್ ಬುಕ್ಕಣ್ಣ, ಅಶೋಕ್ ಸಿಂಗ್ ಠಾಕೂರ್,ವೆಂಕಟೇಶ್ ಕೋಳಬಾಳ, ಪಂಚಾಕ್ಷರಯ್ಯ ಸ್ವಾಮಿ, ಸೂಗಣ್ಣ ಬಾಳೆಕಾಯಿ, ಕರಿಬಸಯ್ಯ ಸ್ವಾಮಿ,ಮಲ್ಲಿಕಾರ್ಜುನ
ವೆಂಕಟಾಪುರ,ಕಾಳಪ್ಪ ಪತ್ತಾರ, ಸಂತೋಷ, ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಪದಾಧಿಕಾರಿಗಳು,ಮುಖಂಡರು ಕಾರ್ಯಕರ್ತರು ಇದ್ದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ