"ಶವವಾದ ಲೈನ್ ಮ್ಯಾನ್, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಆರೋಪ"
ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಲೈನ್ ಬದಲಾವಣೆ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಲೈನ್ ಮ್ಯಾನ್ ಇರುವ ದುರ್ಘಟನೆ ಬುಧವಾರ ನಡೆದಿದೆ. ಮೃತ ದುರ್ದೈವಿ ಲೈನ್ ಮ್ಯಾನ್ ಅಜ್ಜಯ್ಯ(29), ದೂಪದಹಳ್ಳಿ ಗ್ರಾಮದ ಕಂಬಳ ವಿದ್ಯುತ್ ಸಮಸ್ಯೆ ಪರಿಹರಿಸಲು ವಿದ್ಯುತ್ ಮೇಲೇರಿ ಕೆಲಸ ಮಾಡುತ್ತಿದ್ದಾರೆ. ವೇಳೆ ಈ ಘಟನೆ ನಡೆದಿದೆ. ಕೆಲಸಕ್ಕೂ ಮುನ್ನ ಕೊಟ್ಟೂರು ಉಪಕೇಂದ್ರದಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಬಳಿಕ ಕಂಬ ಹತ್ತಿದ್ದಾನೆ. ಆದರೆ ಕಂಬದ ಮೇಲೇರಿ ಕೆಲಸ ನಿರ್ವಹಿಸುತ್ತಿದ್ದ ಏಕಾಏಕಿ ಲೈನ್ ನಲ್ಲಿ ವಿದ್ಯುತ್ ಪೂರೈಕೆಯಾದ ಹಿನ್ನಲೆಯಲ್ಲಿ ಕಂಬದ ಮೇಲಿನ ಲೈನ್ ಮ್ಯಾನ್ ಶವವಾಗಿದ್ದಾನೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕರ್ತವ್ಯನಿರತ ಲೈನ್ ಮ್ಯಾನ್ ಕಂಬದ ಮೇಲೆಯೇ ಶವವಾಗಿ ನೇತಾಡುತ್ತಿರುವ ದೃಶ್ಯ ಮನ ಕಲಕುವಂತಿದೆ. ಜೆಸ್ಕಾಂ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೇ, ಲೈನ್ ಬದಲಾವಣೆ ಮಾಡಲು ಸೂಚಿಸಿರುವ ತಪ್ಪು ಮಾಹಿತಿ ನೀಡಿರೋದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಮೃತ ಲೈನ್ ಮ್ಯಾನ್ ಅಜ್ಜಯ್ಯನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜೆಸ್ಕಾಂ ಮೇಲಾಧಿಕಾರಿಗಳು ಬರುವಂತೆ ಸ್ಥಳೀಯರು ಮತ್ತು ಕುಟುಂಬಸ್ಥರು ಆಗ್ರಹಿಸಿದ್ದಾರೆ. ವಿದ್ಯುತ್ ಕಂಬದ ಮೇಲಿಂದ ಮೃತದೇಹವನ್ನು ಕೆಳಗಿಸದಂತೆ ಪಟ್ಟು ಹಿಡಿದಿದ್ದಾರೆ. ಈ ಸಾವಿಗೆ ಜೆಸ್ಕಾಂ ಇಲಾಖ...