"ಶವವಾದ ಲೈನ್ ಮ್ಯಾನ್, ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಆರೋಪ"

ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಲೈನ್ ಬದಲಾವಣೆ ಮಾಡುವ ವೇಳೆ ವಿದ್ಯುತ್‌ ಪ್ರವಹಿಸಿ ಕಂಬದ ಮೇಲೆ ಲೈನ್ ಮ್ಯಾನ್ ಇರುವ ದುರ್ಘಟನೆ ಬುಧವಾರ ನಡೆದಿದೆ.

ಮೃತ ದುರ್ದೈವಿ ಲೈನ್ ಮ್ಯಾನ್ ಅಜ್ಜಯ್ಯ(29), ದೂಪದಹಳ್ಳಿ ಗ್ರಾಮದ ಕಂಬಳ ವಿದ್ಯುತ್ ಸಮಸ್ಯೆ ಪರಿಹರಿಸಲು ವಿದ್ಯುತ್ ಮೇಲೇರಿ ಕೆಲಸ ಮಾಡುತ್ತಿದ್ದಾರೆ. ವೇಳೆ ಈ ಘಟನೆ ನಡೆದಿದೆ.

ಕೆಲಸಕ್ಕೂ ಮುನ್ನ ಕೊಟ್ಟೂರು ಉಪಕೇಂದ್ರದಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಬಳಿಕ ಕಂಬ ಹತ್ತಿದ್ದಾನೆ. ಆದರೆ ಕಂಬದ ಮೇಲೇರಿ ಕೆಲಸ ನಿರ್ವಹಿಸುತ್ತಿದ್ದ ಏಕಾಏಕಿ ಲೈನ್ ನಲ್ಲಿ ವಿದ್ಯುತ್ ಪೂರೈಕೆಯಾದ ಹಿನ್ನಲೆಯಲ್ಲಿ ಕಂಬದ ಮೇಲಿನ ಲೈನ್ ಮ್ಯಾನ್ ಶವವಾಗಿದ್ದಾನೆ.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕರ್ತವ್ಯನಿರತ ಲೈನ್ ಮ್ಯಾನ್ ಕಂಬದ ಮೇಲೆಯೇ ಶವವಾಗಿ ನೇತಾಡುತ್ತಿರುವ ದೃಶ್ಯ ಮನ ಕಲಕುವಂತಿದೆ.

ಜೆಸ್ಕಾಂ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೇ, ಲೈನ್ ಬದಲಾವಣೆ ಮಾಡಲು ಸೂಚಿಸಿರುವ ತಪ್ಪು ಮಾಹಿತಿ ನೀಡಿರೋದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಮೃತ ಲೈನ್ ಮ್ಯಾನ್‌ ಅಜ್ಜಯ್ಯನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜೆಸ್ಕಾಂ ಮೇಲಾಧಿಕಾರಿಗಳು ಬರುವಂತೆ ಸ್ಥಳೀಯರು ಮತ್ತು ಕುಟುಂಬಸ್ಥರು ಆಗ್ರಹಿಸಿದ್ದಾರೆ. ವಿದ್ಯುತ್ ಕಂಬದ ಮೇಲಿಂದ ಮೃತದೇಹವನ್ನು ಕೆಳಗಿಸದಂತೆ ಪಟ್ಟು ಹಿಡಿದಿದ್ದಾರೆ.

ಈ ಸಾವಿಗೆ ಜೆಸ್ಕಾಂ ಇಲಾಖೆ ಮೇಲಾಧಿಕಾರಿಗಳೇ ಕಾರಣ, ಅವರ ನಿರ್ಲಕ್ಷ್ಯದಿಂದಲೇ ಈ ಸಾವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೂಡಲೇ ಜೆಇ ಬರಬೇಕು ಅಲ್ಲಿಯವರೆಗೂ ಮೃತದೇಹ ಕೆಳಗಿಸಲು ಬಿಡೋದಿಲ್ಲ ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಯಿತು.

ಮೃತದೇಹ ಕೆಳಗಿಳಿಸಲು ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*