ಅಂಗನವಾಡಿ, ಶಾಲೆಯಲ್ಲಿ ಮಕ್ಕಳಿಗೆ ಸೌಕರ್ಯ ಕಲ್ಪಿಸಿ : ತೆಗ್ಗಿನಕೇರಿ ಹನುಮಂತಪ್ಪ ವಕೀಲರು
ಹೈಲೈಟ್ಸ್:
ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲ
ಅಂಗನವಾಡಿಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಿ
"ಅಂಗನವಾಡಿಗಳಿಗೆ ವಿದ್ಯುತ್, ಫ್ಯಾನ್, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಒತ್ತಾಯ"
ಕೊಟ್ಟೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದೆ.
ಪಟ್ಟಣದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲ. ಕೆಲವಡೆ ಶೌಚಾಲಯ ಇಲ್ಲ. ಕುಡಿಯುವ ನೀರು, ವಿದ್ಯುತ್ ಪೂರೈಕೆ ಸಮಸ್ಯೆ ಇದೆ. ಇದಲ್ಲದೆ ಮಕ್ಕಳಿಗೆ ಪೂರಕ ವಾತಾವರಣ ಇಲ್ಲ ಎಂಬ ದೂರುಗಳು ಸಾರ್ವಜನಿಕರಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿವೆ.
ಪಟ್ಟಣದ ಗ್ರಂಥಾಲಯ ಹಿಂಭಾಗದಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಲು ಜಾಲಿ ಗಿಡಗಳು, ಎಲ್ಲೆಂದರಲ್ಲಿ ತಿಪ್ಪೆಗುಂಡಿ ನಿರ್ಮಾಣವಾಗಿರುವುದರಿಂದ ಅಂಗನವಾಡಿ ಕೇಂದ್ರಕ್ಕೆ ತೆರಳುವ ಮಕ್ಕಳು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು , ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪೋಷಕರಲ್ಲಿ ಆತಂಕ ಎದುರಾಗಿದೆ . . . .
ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ,ಸರಕಾರದ ಆದ್ಯ ಕರ್ತವ್ಯ ಎಂದು ಸ್ಥಳೀಯ ಸಾರ್ವಜನಿಕರಾದ ರಮೇಶ್ , ಮಂಜುನಾಥ್ ,ಅಂಜನಿ, ಪ್ರವೀಣ್ ಕುಮಾರ್ ಪತ್ರಿಕೆ ಮೂಲಕ ಒತ್ತಾಯಿಸಿದರು
ಕೋಟ್ -1
ಪಟ್ಟಣದ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಸೇರಿ ಅಗತ್ಯ ಮೂಲಸೌಕರ್ಯಗಳಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ತೆಗ್ಗಿನಕೇರಿ ಹನುಮಂತಪ್ಪ ವಕೀಲರು ಹೇಳಿದರು



ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ