"ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ"

ಕೊಟ್ಟೂರು: ಪೊಲೀಸ್ ಇಲಾಖೆಯಲ್ಲಿ ಪ್ರಮಾಣಿಕ ಸೇವೆ ಸಲ್ಲಿಸಿದ್ದ ಕೊಟ್ಟೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್  ಕಲ್ಲೇಶ್ ಅವರು ಹೆಡ್ ಕಾನ್‌ಸ್ಟೇಬಲ್ ಹುದ್ದೆಗೆ ಮುಂಬಡ್ತಿ ನೀಡಲಾಯಿತು 

ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹಾಗೂ ಕೊಟ್ಟೂರು ಪಿಎಸ್‌ಐ ಗೀತಾಂಜಲಿ ಸಿಂಧೆ ಶುಕ್ರವಾರ ಠಾಣೆಯಲ್ಲಿ ಅಭಿನಂದಿಸಿ ಗೌರವಿಸಿದರು. 

ಪಡೆದಿರುವ ಹುದ್ದೆಯಲ್ಲಿ ಪ್ರಾಮಾಣಿಕ ,ಶ್ರದ್ದೆ ಮತ್ತು ನಿಷ್ಠೆಯಿಂದ ಸೇವೆಯನ್ನು ಸಲ್ಲಿಸಿ ಇನ್ನೂ ಉನ್ನತ ಹುದ್ದೆಯು ದೊರೆಯುವಂತಾಗಲಿ ಎಂದು ಪಿಎಸ್‌ಐ ಗೀತಾಂಜಿಲಿ ಸಿಂಧೆ ಶುಭ ಹಾರೈಸಿದರು. 

ಒಳ್ಳೆಯ ಕರ್ತವ್ಯ ನಿರ್ವಹಿಸಿದ ಕಾನ್ ಸ್ಟೇಬಲ್  ಕಲ್ಲೇಶ್ ಅವರಿಗೆ ಸಾರ್ವಜನಿಕ ವಲಯದಲ್ಲಿ ಮುಂಬಡ್ತಿ ಪಡೆದಿದ್ದಕ್ಕೆ  ಸಂಘ, ಸಂಸ್ಥೆ ,ಸಂಘಟನೆಗಳು ಮೆಚ್ಚುಗೆ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಶಶಿಧರ ಸ್ವಾಮಿ, ಚಂದ್ರಶೇಖರ್,ವಿಷ್ಣು , ಬಸವರಾಜ್,   ಶಂಕ್ರಪ್ಪ, ಸಿದ್ದಪ್ಪ, ರಮೇಶ್, ಸಂತೋಷ, ಬಸವರಾಜ್,  ಎರ್ರಿಸ್ವಾಮಿ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*