ನಮ್ಮ ಪ್ರಜಾ ಸಾಕ್ಷಿ ಇ ಪತ್ರಿಕೆಯ ವರದಿಗೆ ಎಚ್ಚೆತ್ತ ಸರ್ವೇ ಇಲಾಖೆ ಅಧಿಕಾರಿಗಳು

 

ನಮ್ಮ ಪ್ರಜಾ ಸಾಕ್ಷಿ ಇ ಪತ್ರಿಕೆಯ ವರದಿ ಫಲಶೃತಿ


ಧ್ವಜಾರೋಹಣ ಮಾಡದೇ ಅಪಮಾನ ಮಾಡಿದ ಸರ್ವೇ ಇಲಾಖೆ ಅಧಿಕಾರಿಗೆ ಡಿಡಿ ಎಲ್ ಆರ್ ನೋಟಿಸ್

ವರದಿ : ಗ್ಯಾನಪ್ಪ ದೊಡ್ಡಮನಿ 

ಮಸ್ಕಿ : ದೇಶದಾದ್ಯಂತ 79ನೇ ಸ್ವಾತಂತ್ರೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಪಟ್ಟಣದ ಕೆಲವು ಕಚೇರಿ ಹಾಗೂ ಸಹಕಾರಿ ಬ್ಯಾಂಕ್‌'ಗಳಲ್ಲಿ ಧ್ವಜಾರೋಹಣ ಮಾಡದೇ ನಿರ್ಲಕ್ಷ್ಯ ಮೆರೆದಿದ್ದು, ಸಾರ್ವಜನಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಟ್ಟಣದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿರಾಷ್ಟ್ರ ಧ್ವಜಾರೋಹಣ ಮಾಡದೇ ಅಗೌರವ ತೋರಿ ಅಪಮಾನ ಮಾಡಿದ್ದಾರೆ.

ಯಾವುದೇ ರೀತಿ ಕಟ್ಟಡ ಜಾಗದ ವ್ಯವಸ್ಥೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಆಟೋ ಮತ್ತು ಹಮಾಲರ ಸಂಘಗಳು ಹಬ್ಬದಂತೆ ಸ್ವಾತಂತ್ರೋತ್ಸವನ್ನು ಆಚರಣೆ ಮಾಡಿರುವುದಕ್ಕೆ ಸಾರ್ವಜನಿಕರು ಪ್ರಶಂಸೆ ವಕ್ತಪಡಿಸಿದ್ದಾರೆ. ಇವರೊಟ್ಟಿಗೆ ರೈತರಿಗೆ ಇರುವಂತಹ ಪರಿಕಲ್ಪನೆಗಳು ಈ ವಿದ್ಯಾವಂತರಿಗೆ ಇಲ್ಲದಿರುವುದು ಒಂದು ನೋವಿನ ಸಂಗತಿ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಯಾವುದೇ ರೀತಿಯ ಸ್ಪಂದನೆ ನೀಡಿರುವುದಿಲ್ಲ.ಬಹುತೇಕ ಸಾರ್ವಜನಿಕರ ಮೊಬೈಲ್ ಸಂಖ್ಯೆಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದಾರೆ

79 ನೇ ಸ್ವಾತಂತ್ರೋತ್ಸವದ ದಿನ ಇಂತಹ ದೇಶಕ್ಕೆ ಅಗೌರವ ತರುವ ರೀತಿಯಲ್ಲಿ ನಿರ್ಲಕ್ಷ್ಯ ವಹಿಸಿರುವ ಸಂಸ್ಥೆಗಳ ವಿರುದ್ಧ ಸಂಭಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವರೇ ಕಾದುನೋಡಬೇಕಿದೆ. ಎಂದು ಆಗಷ್ಟ 15 ರಂದು ನಮ್ಮ ಪ್ರಜಾ ಸಾಕ್ಷಿ ಇ ಪತ್ರಿಕೆಯಲ್ಲಿ ವರದಿ ಮಾಡಲಾಗಿತ್ತು ವರದಿಗೆ ಎಚ್ಚೆತ್ತ ಸರ್ವೇ ಇಲಾಖೆಯ ಭೂ ದಾಖಲೆಗಳ ಉಪ ನಿರ್ದೇಶಕರು ರಾಯಚೂರು ಜಿಲ್ಲಾ ಅಧಿಕಾರಿಯು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿ ಮಸ್ಕಿ ಇವರಿಗೆ ಆಗಸ್ಟ್ 19 ಮಂಗಳವಾರ ರಂದು ಕಾರಣ ಕೇಳುವ ನೋಟಿಸ್ ಅನ್ನು ವಿತರಣೆ ಮಾಡಿದ್ದು 3 ದಿನದೊಳಗೆ ಉತ್ತರ ನೀಡಲು ನೋಟಿಸ್ ಜಾರಿ ಮಾಡಲಾಗಿದೆ. ಆದರೆ 6 ದಿನವಾದರೂ ಇನ್ನು ಉತ್ತರ ಕೊಡದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಜಿಲ್ಲಾ ಉಪ ನಿರ್ದೇಶಕರ ನಡೆ ಎತ್ತ ಕಡೆ ಎಂಬುದನ್ನು ಕಾದು ನೋಡಬೇಕಿದೆ.?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*