ಪೋಸ್ಟ್‌ಗಳು

ಕೊಟ್ಟೂರು ಪವಿತ್ರ ರಂಜಾನ್ ಹಬ್ಬ ಆಚರಣೆ

ಇಮೇಜ್
ಕೊಟ್ಟೂರು ಪವಿತ್ರ ರಂಜಾನ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಭಾಂದವರು ಸೋಮವಾರ ಸಡಗರ ಸಂಭ್ರಮಗಳೊಂದಿಗೆ ಆಚರಿಸಿದರು, ಇಲ್ಲಿನ  ಪ್ರಮುಖ ಮಸೀದಿಗಳಲ್ಲಿ ಹಬ್ಬದ ನಿಮಿತ್ತವಾಗಿ ಮುಸ್ಲಿಂ ಆರಾಧ್ಯ ದೈವ ಅಲ್ಲಾಹುವಿನ ನಾಮಸ್ಮರಣೆ ಬೆಳೆಗ್ಗೆ ೯ ರಿಂದಲೇ ಮಾರ್ದನಿಸಿದವು.  ಪಟ್ಟಣದ ಬಿಲಾಲ್, ಉಸ್ಮಾನಿಯ, ಜಾಮೀಯ, ಮುಬಾರಕ್, ಇಲಾಹಿ,ತೌಹಿದ್ ಮಸೀದಿಗಳಿಂದ ಮುಸ್ಲಿಂ ಜನಾಂಗದವರು ನೂರಾರು ಸಂಖ್ಯೆಯಲ್ಲಿ ಜಮಾವಣೆ ಗೊಂಡು ಪಾದಯಾತ್ರೆಯ ಮೆರವಣಿಗೆ ಕೈಗೊಂಡರು. ನಂತರ ಇಲ್ಲಿನ ಹಗರಿಬೊಮ್ಮನಹಳ್ಳಿ ರಸ್ತೆಯಲ್ಲಿನ ಖಬರ್‌ಸ್ಥಾನದಲ್ಲಿ ಕೂಡಿಕೊಂಡು ಸಾಮೂಹಿಕ ಪ್ರಾರ್ಥನೆ ಕೈಗೊಂಡರು. ಧರ್ಮಗುರುಗಳಾದ ಖಾರಿ ಹಾಫೀಜ್ ಇಮ್ರಾನ್ ರವರು ನೆರೆದಿದ್ದ ಭಾಂದವರಿಗೆ ಧರ್ಮೊಪದೇಶ ನೀಡಿ ಪ್ರಾರ್ಥನೆಯನ್ನು ಭೋದಿಸಿದರು. ಇವರ ಅಜ್ಞಾನುಸಾರ ಜನಾಂಗದ ಭಾಂದವರು ರಾಗಬದ್ದವಾಗಿ ಅಲ್ಲಾಹುನನ್ನು ಸ್ಮರಿಸಿ ನಮಸ್ಕರಿಸಿದರು. ನಂತರ ಪರಸ್ಪರ ಒಬ್ಬರನ್ನು ಒಬ್ಬರು ಆಲಂಗಿಸಿಕೊಂಡು ಈದ್-ಮುಬರಕ್ ಹೇಳಿಕೊಂಡರು. ಈ ಸುಸಂಧರ್ಭದಲ್ಲಿ ಹಾಫೀಜ್ ಜಬಿ ಉಲ್ಲಾ, ಹಾಫೀಜ್ ಸಾಜೀದ್, ಮುಫ್ತಿ ಯಾಸೀನ್, ಹಾಫೀಜ್ ಚಾಂದ್ ಭಾಷಾ, ಅಯೂಬ್ ಖಾನ್, ನೂರುಲ್ಲಾ ಖಾನ್, ನಜೀರ್ ಸಾಬ್, ಬಾಷಾ ಸಾಬ್ ಇನ್ನು ಮಸೀದಿಯ ಪ್ರಮುಖ ಮುಖಂಡರು ಸೇರಿದ್ದರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಸ್ವಾಗತ ಕೋರಿ ಧನ್ಯವಾದಗಳು ತಿಳಿಸಿದರು.

ಕೊಟ್ರೇಶ್ ಚಿಮ್ಮನಹಳ್ಳಿ : ಮುಖ್ಯಮಂತ್ರಿ ಪದಕ ಪ್ರದಾನ ಪ್ರಶಸ್ತಿಗೆ ಆಯ್ಕೆ

ಇಮೇಜ್
ಕೊಟ್ಟೂರು : ತಾಲೂಕಿನ  ಬೋರನಹಳ್ಳಿ ಗ್ರಾಮದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ಆರಕ್ಷಕ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಕೊಟ್ರೇಶ್ ಅವರು 2005 ರಿಂದ ಪೊಲೀಸ್ ಇಲಾಖೆಯಲ್ಲಿ   ಕಾರ್ಯ ಸುಮಾರು 20 ವರ್ಷಗಳಿಂದ   ನಿರ್ವಹಿಸುತ್ತಿದ್ದಾರೆ. ಇವರು ಅಪರಾಧ ವಿಭಾಗದಲ್ಲಿ ಅಪಾರ ಸೇವೆ ಸಲ್ಲಿಸಿ, ಮಾಡಿದ ಸಾಧನೆಗೆ ಸುಮಾರು 37 ನಗದು ಬಹುಮಾನ,  54 ಪ್ರಶಸ್ತಿ, 3 ಪ್ರಶಂಸೆ ಪತ್ರ, ರಾಜ್ಯ ಮಟ್ಟದ ಪ್ರಶಸ್ತಿ ನೀಡಿ  ಈಗಾಗಲೇ ಗೌರವಿಸಲಾಗಿದೆ. ಪ್ರಸ್ತುತ ಇವರು  ಕೂಡ್ಲಿಗಿಯ ಡಿವೈಎಸ್ಪಿ ಕಛೇರಿಯ ಅಪರಾಧ ವಿಭಾಗದಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಒಟ್ಟು 197 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ಪ್ರದಾನ ಪ್ರಶಸ್ತಿಗೆ  ಭಾಜನರಾಗಿದ್ದಾರೆ  ಮುಖ್ಯಮಂತ್ರಿ ಪದಕಕ್ಕೆ  ಕೊಟ್ರೇಶ್ ಅವರು ಆಯ್ಕೆಯಾಗಿರುವುದು ಊರಿಗೆ ಮತ್ತು  ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಇವರಿಗೆ ಗ್ರಾಮಸ್ಥರು, ಸ್ನೇಹಿತರು ಶುಭ ಹಾರೈಸಿ ಹರ್ಷವನ್ನು ವ್ಯಕ್ತಪಡಿಸುತ್ತಿದ್ದಾರೆ.

ಬೇಡಿಕೆಗಳ ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ಪ್ರತಿಭಟನೆ

ಇಮೇಜ್
  ಬೆಂಗಳೂರು, ಮಾ, 29; ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು.  ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು" ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದೆ. ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟ, ಅಖಿಲ ಭಾರತ ನಿವೃತ್ತ ಬ್ಯಾಂಕ್ ನಿವೃತ್ತರ ಸಂಘ, ಫೋರಂ ಆಫ್ ರಿಟೈರ್ಡ್ ಬ್ಯಾಂಕ್ ಎಂಪ್ಲಾಯೀಸ್, ವಾಣಿಜ್ಯ ಬ್ಯಾಂಕ್ ಗಳ ನಿವೃತ್ತರ ಸಂಘ, ರಿಟೈರ್ಡ್ ಬ್ಯಾಂಕ್ ಆಫೀಸರ್ಸ್ ಕಾನ್ಫಡರೇಷನ್, ಬ್ಯಾಂಕ್ ರ್ಸ್ ಡಿಸರ್ವ್ ಜಸ್ಟಿಸ್ ಸೊಸೈಟಿ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ನ ಗುಂಪುಗಳ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.  "ಸಂಯುಕ್ತ ವೇದಿಕೆ"ಯ ಸಂಚಾಲಕರಾದ ಎಸ್.ಸಿ ಜೈನ್ ಮಾತನಾಡಿ, 1995 ರಿಂದ ಬಾಕಿ ಇರುವ ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆ, ವಿಶೇಷ ಭತ್ಯೆಗಳ ಮೇಲೆ ಪಿಂಚಣಿ ನೀಡುವ, ಖಾಸಗಿ ಬ್ಯಾಂಕ್ ನಿವೃತ್ತರಿಗೂ ಎಕ್ಸ್ ಗ್ರೇಶಿಯಾ ಕೊಡುವ, ಅರೋಗ್ಯ ವಿಮೆಯ ಸುಧಾರಣೆ ಮತ್ತು ಅರೋಗ್ಯ ವಿಮೆಯ ಮೇಲಿನ ಜಿ. ಎಸ್. ಟಿಯಿಂದ ಸಂಪೂರ್ಣ ವಿನಾಯತಿ ನೀಡುವ, ವಾಣಿಜ್ಯ ಬ್ಯಾಂಕುಗಳ ಪಿಂಚಣಿದಾರರಿಗೆ ಆ...

ಹಿರೇ-ನಗ-ನೂರು."ನಗ "ಎಂದರೆ ಬಂಗಾರ,ದ ಊರಿನಲ್ಲಿ.ಸಂಭ್ರಮದಿಂದ ಯುಗಾದಿ ಆಚರಣೆ.

ಇಮೇಜ್
  ಹಟ್ಟಿ ಚಿನ್ನದ ಗಣಿ:30ಬಂಗಾರ ಸಿಗುವ ಗಣಿ ಎಂದರೆ ಅದು ಹಟ್ಟಿ ಚಿನ್ನದ ಗಣಿ.ಪಟ್ಟಣದ ಸಮೀಪವಿರುವ ಹಿರೇನಗನೂರು ಗ್ರಾಮದಲ್ಲಿ.ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ.ನಮ್ಮ ದೇಶದ ಅನೇಕ ಕಡೆಗಳಲ್ಲಿ.ಈ ದಿನ ಹೊಸ ವರ್ಷದ ಮೊದಲ ದಿನ.ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.ಯುಗಾದಿ" ಪದದ ಉತ್ಪತ್ತಿ"ಯುಗ+ಆದಿ"-- ಹೊಸ ಯುಗದ ಆರಂಭ.ಯುಗಾದಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ.ಗ್ರಾಮದ ಹಿರಿಯರಾದ ವಿರೂಪಾಕ್ಷಪ್ಪ ಮಾಲಿ ಪಾಟೀಲ್.ಶಿವನಗೌಡ ನಗರ್.ಹಾಗೂ ವಿಶೇಷವಾಗಿ ವಾಲ್ಮೀಕಿ ಯುವಕ ಮಂಡಳಿಯ ಅಧ್ಯಕ್ಷರಾದ ಕನಕಪ್ಪ ಬೆಂಚಮಟ್ಟಿ.ಉಪಾಧ್ಯಕ್ಷರಾದ ಹುಲಗಪ್ಪ ಗುರಿಕಾರ್.ಕಾರ್ಯದರ್ಶಿ ಈರಪ್ಪ ಗುರಿಕಾರ ಹಾಗೂ ಸದಸ್ಯರು.ಹಾಗೂ ಗ್ರಾಮದ ಗುರುಹಿರಿಯರು ಮಹಿಳೆಯರು.ಮುದ್ದು ಮಕ್ಕಳು ಸೇರಿ.ಗ್ರಾಮದ ಹೃದಯ ಭಾಗದಲ್ಲಿರುವ ಆಂಜನೇಯ ದೇವಸ್ಥಾನದ ಅರ್ಚಕರಾದ ವಿರೂಪಾಕ್ಷಪ್ಪ ಪೂಜಾರಿ ಇವರ ಮನೆಯಿಂದ.ಆಂಜನೇಯ ಸ್ವಾಮಿಯ ದೇವಸ್ಥಾನದ ಗೋಪುರದ ಮೇಲಿರುವ ಕಳಶವನ್ನು ಮೆರವಣಿಗೆ ಮುಖಾಂತರ ತರಲಾಯಿತು.ನಂತರ ಗೋಪುರದ ಮೇಲೆ ಕಳಶವನ್ನು ಸ್ಥಾಪಿಸಲಾಯಿತು. ನಂತರ ಗರ್ಭಗುಡಿಯ ಆಂಜನೇಯ ಸ್ವಾಮಿಗೆ ಅರ್ಚಕರಾದ ವಿರೂಪಾಕ್ಷಪ್ಪ ಪೂಜಾರಿ ಇವರಿಂದ ಕಾಯಿ ಕರ್ಪೂರಗಳಿಂದ ಪೂಜೆ ಸಲ್ಲಿಸಲಾಯಿತು.ನಂತರ ಗ್ರಾಮದ ಎಲ್ಲಾ ಜನರು ತಮ್ಮ ಹರಕೆಯನ್ನು ಸಲ್ಲಿಸಿದರು.ಗ್ರಾಮದ ಎಲ್ಲಾ ಜನರಿಗೂ ಬೇವು ಬೆಲ್ಲ.ಹಾಗೂ ಮಹಾಪ್ರಸಾದವನ್ನು ವಿತರಣೆ ಮಾಡಲಾಯಿತು. ಈ ಸಂದ...

ಪಟ್ಟಣ ಪಂಚಾಯಿತಿ ವತಿಯಿಂದ ಯುಗಾದಿ ಹಾಗೂ ರಂಜಾನ್ ಹಬ್ಬದ ಶುಭಾಶಯಗಳು

ಇಮೇಜ್
ಕೊಟ್ಟೂರು : ನಾಡಿನ ಸಮಸ್ತ ಜನರಿಗೆ ಯುಗಾದಿ ಹಾಗೂ ರಂಜಾನ್ ಹಬ್ಬದ ಶುಭಾಶಯಗಳು ಕೋರುವವರು ಪಟ್ಟಣ ಮುಖ್ಯ ಅಧಿಕಾರಿಗಳು ಹಾಗೂ ಅಧ್ಯಕ್ಷರು , ಉಪಾಧ್ಯಕ್ಷರು,ಸ್ಥಾಯಿ ಸಮಿತಿ ಅಧ್ಯಕ್ಷರು ಸಿಬ್ಬಂದಿ ವರ್ಗದವರು ಶುಭಾಶಯಗಳು ತಿಳಿಸಿದರು

ಎಮ್ ಡಿ ಆರ್ ಅಂಡ್ ಸನ್ಸ್ ವತಿಯಿಂದ ಆಯೋಜಿಸಿದ್ದ ಯುಗಾದಿ ಹಾಗೂ ಪವಿತ್ರ ರಂಜಾನ್ ಹಬ್ಬದ ಇಫ್ತಾರ್ ಕೂಟ.

ಇಮೇಜ್
ಹಟ್ಟಿ ಚಿನ್ನದ ಗ ಣಿ: ಸರ್ವಧರ್ಮ ಸಮನ್ವಯ ಸಾರುವ ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯ ಮದೀನಾ ಮಸೀದಿ ಕಾಕಾನಗರ ಹಟ್ಟಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಮಾಜಿ ಎಪಿಎಂಸಿ ನಿರ್ದೇಶಕರು ಹಾಗೂ ಕಾಂಗ್ರೆಸ್ಸಿನ ಮುಖಂಡರಾದ ಅಮ್ಜದ್ ಸೆಟ್ ಇವರು.ಹಟ್ಟಿ ಹಾಗೂ ಸುತ್ತಮುತ್ತಲಿನ ಎಲ್ಲಾ ಧರ್ಮಿಯರನ್ನು.ಜಾತಿ ಮತ ಪಂಥವೆನ್ನದೆ ಗುರುವಾರ ಬೇವು ಬೆಲ್ಲದ ಜೊತೆಗೆ ಹೋಳಿಗೆ ತುಪ್ಪ ಹಾಗೂ ವಿವಿಧ ತರಹದ ಹಣ್ಣು ಹಂಪಲುಗಳು ಹಾಗೂ ವಿಶೇಷವಾಗಿ ಖರ್ಜೂರ ಸೇರಿದಂತೆ ಹಲವು ಖಾದ್ಯಗಳನ್ನು ಇಫ್ತಿಯಾರ್‌ ಕೂಟದಲ್ಲಿ ಏರ್ಪಡಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದೂ ಮುಸ್ಲಿಂ ಕ್ರೈಸ್ತರು ಎನ್ನದೆ ಎಲ್ಲಾ ಧರ್ಮಿಯರು ಭಾಗವಹಿಸಿದ್ದರು.ವಿಶೇಷವಾಗಿ ಲಿಂಗಸಗೂರು ಕ್ಷೇತ್ರದ ಮಾಜಿ ಶಾಸಕರಾದ ಡಿ ಎಸ್ ಹುಲಿಗೇರಿ ಹಾಗೂ ಬ್ಲಾಕ್ ಅಧ್ಯಕ್ಷ ಗೋವಿಂದ ನಾಯಕ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು.ಇತರ ಪಕ್ಷಗಳ ನಾಯಕರು ಮತ್ತು ಮುಸ್ಲಿಂ ಬಾಂಧವರು ಈ ಇಪ್ತರ್ ಕೂಟದಲ್ಲಿ ಭಾಗವಹಿಸಿದ್ದರು.ಯುನೈಟೆಡ್ ಮೆತೊಡಿಸ್ಟ್ ಚರ್ಚಿನ ರೆವರೆಂಡ್ ದೇವದನ್ ಆನಂದಪ್ಪ ಮಾತನಾಡಿ,ವಿವಿಧತೆಯಲ್ಲಿ ಏಕತೆ ಸಾರುವ ಜಗತ್ತಿನ ಏಕೈಕ ದೇಶ ಭಾರತ.ಇಲ್ಲಿ ಪ್ರೀತಿ.ಸೌಹಾರ್ದತೆಯಿಂದ ಸಹಬಾಳ್ವೆ ಮಾಡುತ್ತಿರುವ ನಾವು ಯಾವುದೇ ಕಾರಣಕ್ಕೂ ಪರಸ್ಪರ ದ್ವೇಷ ಮನೋಭಾವನೆ ತೋರಬಾರದು ಎಂದು ಮಾತನಾಡಿದರು.ಅಮ್ಜದ್ ಸೇಟ್ ಹಾಗೂ ಕುಟುಂಬದ ಸದಸ್ಯರು ಇಪ್ತಾರ್ ಕೂಟವನ್ನು ಪ್ರಾರ್ಥನೆ ಭಕ್ತಿ ಭಾವದಿಂದ ನೆರವೇರಿಸಿ ಕೊಟ್ಟರು .

ರಂಜಾನ್‌ ಹಬ್ಬ : ಶಾಂತಿ ಸಭೆ

ಇಮೇಜ್
ಪವಿತ್ರ ರಂಜಾನ್‌ ಹಬ್ಬದ ನಿಮಿತ್ತ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ  ಗುರುವಾರ ಶಾಂತಿ ಸಭೆ ನಡೆಯಿತು. ಕೊಟ್ಟೂರು : ಪವಿತ್ರ ರಂಜಾನ್‌ ಹಬ್ಬದ ನಿಮಿತ್ತ ಪಟ್ಟಣದ ಕೊಟ್ಟೂರು ಪೊಲೀಸ್‌ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ನಡೆಯಿತು. ಪಿಎಸ್‌ಐ ಗೀತಾಂಜಲಿ ಶಿಂಧೆ ಮಾತನಾಡಿ, ಪವಿತ್ರ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಶಾಂತಿ ಕಾಪಾಡಬೇಕು. ಹಬ್ಬದ ನಿಮಿತ್ತ  ಮುಖ್ಯ ರಸ್ತೆಯಲ್ಲಿನ ದರ್ಗಾಕ್ಕೆ ತೆರಳಲು ರಸ್ತೆಯ ಒಂದು ಬದಿಯಲ್ಲಿ ಅವಕಾಶ ಕಲ್ಪಿಸಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಜಾಗೃತಿ ವಹಿಸಿ. ಮಸೀದಿ ಸ್ವಚ್ಛತೆ, ಸಣ್ಣಪುಟ್ಟ ಗೊಂದಲಗಳಿದ್ದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ. ಯುವಕರಿಗೆ ರಾತ್ರಿ ವೇಳೆ ಬೈಕ್‌ಗಳಲ್ಲಿ ಮೂರ್ನಾಲ್ಕು ಜನರು ಸಂಚರಿಸದಂತೆ ಹಿರಿಯರು ಸೂಚಿಸಬೇಕು. ಠಾಣೆ ವ್ಯಾಪ್ತಿಯ ಬರುವ  ಹಳ್ಳಿಗಳಲ್ಲಿ ಮುಸ್ಲಿಂ ಬಾಂಧವರು ಹಬ್ಬ ಆಚರಿಸುವುದರಿಂದ ಸೂಕ್ತ ಬಂದೋಬಸ್ತ್‌ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಸ್ಲಿಂ ಪ್ರಮುಖ ಮುಖಂಡರು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು