ಪೋಸ್ಟ್‌ಗಳು

ಬಳ್ಳಾರಿ ಜಿಲ್ಲೆಯ ಕನ್ನಡದ ಹೊಸ ಕಾವ್ಯ ಪ್ರವರ್ತಕರು ಹಿ.ಮ.ನಾಗಯ್ಯ

ಇಮೇಜ್
  ಕೊಟ್ಟೂರು : ಕನ್ನಡ ಸಾಹಿತ್ಯ ಲೋಕದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯವನ್ನು ರಚಿಸಿದ್ದ ದಿ.ಹಿ.ಮ.ನಾಗಯ್ಯನವರು ಅಂದಿನ ದಿನಗಳಲ್ಲಿ ಹೊಸ ಕಾವ್ಯದ ಪ್ರವರ್ತಕರಾಗಿ ಹೊರ ಹೊಮ್ಮಿದ್ದರು ಎಂದು ಹೊಸಪೇಟೆಯ ಶಿಕ್ಷಕ ಬಿ.ಎಂ.ರಾಜಶೇಖರ ಹೇಳಿದರು. ಪಟ್ಟಣದ ಶ್ರೀ ರೇಣುಕ ಸಭಾಭವನದಲ್ಲಿ ತಾಲೂಕು ಕ.ಸಾ.ಪ. ಆಯೋಜಿಸಿದ್ದ ದಿ.ಹಿ.ಮ.ನಾಗಯ್ಯನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಶನಿವಾರ ವಿಶೇಷ ಉಪನ್ಯಾಸ ನೀಡಿದರು.  ಕೂಡ್ಲಿಗಿ ತಾಲೂಕಿನ ಹಿರೇಕುಂಬಳಕುAಟೆ ಗ್ರಾಮದ ಹಿ.ಮ.ನಾ.ಅವರು, ಕವಿ ಮತ್ತು ಕವಿತೆ ಬೇರೆ ಅಲ್ಲ ಎಂದು ಭಾವಿಸಿದ್ದರಿಂದಲೇ ಅವರ ಸಾಹಿತ್ಯ ಸರಳ ಭಾಷೆಯಲ್ಲಿದೆ. ಪತ್ರಕರ್ತರಾಗಿ, ಸ್ವಂತ ಪತ್ರಿಕೆ ನಡೆಸಿ, ಬೆಂಗಳೂರು ಮಹಾ ನಗರ ಪಾಲಿಕೆ ಸದಸ್ಯರಾಗಿ, ಆಸ್ತಿ ತೆರಿಗೆ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ರಾಮಕೃಷ್ಣ ಹೆಗಡೆಯವರಿಗೆ ಆತ್ಮೀಯರಾಗಿದ್ದ ಅವರಿಗೆ ದೊಡ್ಡ ರಾಜಕೀಯ ನಂಟು ಇದ್ದರೂ ಆಮಿಷಕ್ಕೊಳಗಾಗದೇ ಕೊನೆವರೆಗೂ ಸರಳ ಜೀವನ ನಡೆಸಿದ್ದರು ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ತೆರೆದು, ಭಾಷೆ ಬೆಳಸಿ ರಾಜ್ಯದಲ್ಲಿಯೇ ಉಳಿಯುವಂತೆ ಮಾಡಿದ ಕೀರ್ತಿ ಹಿರಿಯ ಸಾಹಿತಿ ನಾಗೇಶಶಾಸ್ತಿçಗಳಿಗೆ ಸಲ್ಲುತ್ತದೆ. ಅದರಂತೆ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಕಾವ್ಯ ರಚನೆ ಆರಂಭವಾಗಿದ್ದರೂ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯ ರಚಿಸಿದ್ದ ಕೀರ್ತಿ ಹಿ.ಮ.ನಾ.ರದ್ದಾಗಿದೆ. ಸ್ವಾತಂತ್ರö್ಯ ಹೋ...

"ದೇಶದ ಅಭಿವೃದ್ಧಿಗೆ ಕೈಗಾರಿಕೆಗಳು ಅಗತ್ಯವಿದ್ದು ಉದ್ಯೋಗ ಸೃಷ್ಟಿಯಾಗುತ್ತವೆ" : ಸಂಸದ ರಾಜಶೇಖರ ಹಿಟ್ನಾಳ ಕಿರ್ಲೋಸ್ಕರ್ ಕಾರ್ಖಾನೆಯ ಸಾಮಾಜಿಕ ಸೇವೆ ಅನುಕರಣೀಯ

ಇಮೇಜ್
ವರದಿ - ಮಂಜುನಾಥ ಕೋಳೂರು ಕೊಪ್ಪಳ ಕೊಪ್ಪಳ ಸೆ- 18 : - ತಾಲೂಕಿನ ಬೇವಿನಹಳ್ಳಿಯ ಕಿರ್ಲೋಸ್ಕರ್ ಫೆರಸ್ ಕಂಪನಿಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ನಗರದ ಮಧುಶ್ರೀ ಗಾರ್ಡನ್ ನಲ್ಲಿ ಗುರುವಾರ ಏರ್ಪಡಿಸಿದ ಶಿಬಿರದಲ್ಲಿ 395 ಜನರು ಆರೋಗ್ಯ ತಪಾಸನೆ ಮಾಡಿಸಿಕೊಂಡರು . ಕಿರ್ಲೋಸ್ಕರ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ , ಹುಬ್ಬಳ್ಳಿಯ ವಿಹಾನ್ ಹೃದಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ , ಸ್ಥಳೀಯ ಕೆ. ಎಸ್. ಆಸ್ಪತ್ರೆ , ರೆಡ್ ಕ್ರಾಸ್ ಸಂಸ್ಥೆ , ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಯೋಗದಲ್ಲಿ ಶಿಬಿರವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯಾವುದೇ ಊರು, ರಾಜ್ಯ , ದೇಶ ಅಭಿವೃದ್ದಿಯಾಗಬೇಕಾದರೆ ಕಾರ್ಖಾನೆಗಳು ಅವಶ್ಯಕ. ಕಾರ್ಖಾನೆಗಳ ಸ್ಥಾಪನೆಯಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ ಕಾರ್ಖಾನೆಗಳ ಮೂಲಕ ಎಲ್ಲ ರೀತಿಯ ಅಭಿವೃದ್ದಿ ಸಾಧ್ಯವಾಗುತ್ತದೆ. ಯಾವುದೇ ಕಾರ್ಖಾನೆಯಿಂದ 90% ರಷ್ಟು ಒಳಿತಾದರೆ 10% ಕೆಡಕು ಇದ್ದದ್ದೇ ಹಾಗಂತ ನಾವು ಎಲ್ಲಾ ಕಾರ್ಖಾನೆಗಳನ್ನು ವಿರೋದಿಸುವುದಕ್ಕಾಗುವುದಿಲ್ಲ. ಕೊಪ್ಪಳ ಜಿಲ್ಲೆಗೆ ಕಾರ್ಖಾನೆಗಳು ಬರುತ್ತಿವೆ. ಎಲ್ಲರ ಅಭಿಪ್ರಾಯ ಎಂದರೆ ಜನವಸತಿ ಪ್ರದೇಶದಿಂದ ಈ ಕಾರ್ಖಾನೆಗಳು ದೂರ ಇರಬೇಕು ಎನ್ನುವದು ಎಂದು ಹೇಳಿದರು.   ಕಿರ್ಲ...

*ಸರ್ಕಾರದಿಂದ ಕೈ ಬಿಟ್ಟು ಹೋದ ಮಾಜಿ ದೇವದಾಸಿಯರ ಸರ್ಕಾರದ ಆದೇಶದಂತೆ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ. ಶಾಸಕರಾದ ಎನ್ ಟಿ ಶ್ರೀನಿವಾಸ್*

ಇಮೇಜ್
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ವತಿಯಿಂದ ಹಾಗೂ ತಾಲೂಕು ಆಡಳಿತ ಇವರ ಸಮ್ಮುಖದಲ್ಲಿ ಮಾನ್ಯ ಶಾಸಕರಾದ ಎನ್‌.ಟಿ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ನಡೆದ ಮಾಜಿ ದೇವದಾಸಿ ಸಮೀಕ್ಷೆಯ ಕುರಿತು ಕೂಡ್ಲಿಗಿ ತಾಲೂಕಿನ ನೂರಾರು ಮಾಜಿ ದೇವದಾಸಿಯರ ಸಮ್ಮುಖದಲ್ಲಿ ಹಾಗೂ ಹಲವು ಇಲಾಖೆಗಳ ಸಮ್ಮುಖದಲ್ಲಿ ಈ ಹಿಂದೆ ಸರ್ಕಾರಿ ಅಧಿಕಾರಿಗಳು ಕೈ ಬಿಟ್ಟು ಹೋದ ಮಾಜಿ ದೇವದಾಸಿಯರ ಮರು ಸಮೀಕ್ಷೆ ಮಾಡಲು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ,ಹಾಗೂ ತಾಲೂಕಾಡಳಿತ,ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹೀಗೆ ಹಲವು ಇಲಾಖೆಗಳ ಸಮ್ಮುಖದಲ್ಲಿ ಮರು ಸಮೀಕ್ಷೆ ಮಾಡಲು ಸರ್ಕಾರ ಆದೇಶ ಹೊರಡಿಸಿದ್ದು.  ಸರ್ಕಾರದ ಆದೇಶದಂತೆ ಮಾಜಿ ದೇವದಾಸಿಯ ಮಹಿಳೆಯರನ್ನು ಸರ್ಕಾರದ ನಿಯಮಗಳ ಪ್ರಕಾರ ಫಲಾನುಭವಿಗಳ ದಾಖಲಾತಿಗಳನ್ನು ಒಳಗೊಂಡಂತೆ ಆನ್ಲೈನ್ ಡಾಟಾ ಮೂಲಕ ಸಮೀಕ್ಷೆ ಪೂರ್ಣಗೊಳಿಸಲಾಗುತ್ತದೆ. ಎಂದು ಸಿಡಿಪಿಓ ಇಲಾಖೆ ಅಧಿಕಾರಿಯಾದ ಮಾಲಂಬಿ ರವರು ತಿಳಿಸಿದರು.  ಹಾಗೆ ಈ ಒಂದು ಸಮೀಕ್ಷೆಗೆ ಸರ್ಕಾರವು ಮಾಜಿದೇವದಾಸಿಯರ ಸರ್ವೆ ಪಟ್ಟಿಗೆ ಸೇರ್ಪಡೆಯಾಗಲು ಅರ್ಹತೆಗೆ ಹಲವು ದಾಖಲಾತಿಗಳನ್ನು ಒಳಗೊಂಡಂತೆ ಸೇರ್ಪಡೆ ಮಾಡಲಾಗುವುದು ಎಂಬ ಆದೇಶವಿದ್ದು,   ಈ ಸಂದರ್ಭದಲ್ಲಿ ಮಾನ್ಯ ಶಾಸಕರು ತಾಲೂಕಿನ ದೇವದಾಸಿ ತಾಯಂದಿರ ಅನೇಕ ಸಮಸ್ಯೆಗಳ ಸವಾಲುಗಳನ್ನು ಹರಿತು ಸರ್ಕಾರ...

ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ : ಶಾಸಕ ಬಸವನಗೌಡ ತುರುವಿಹಾಳ

ಇಮೇಜ್
  ಮಸ್ಕಿ : ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ ವಾಗಿದೆ ಕಲ್ಯಾಣ ಕರ್ನಾಟಕ ಭಾಗ ಸೇರಿ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಈಡೇರಿಸಿದೆ' ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.  ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಮಸ್ಕಿ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರ‌ ಸಂಘದ ವತಿಯಿಂದ ನಾಲ್ಕನೇ ವರ್ಷದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ ಅವರು ಖಾಸಗಿ ಶಾಲೆ ಕಾಲೇಜು ಗಳು  ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಿ ಪಡಿಸಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ.ಸಮಾಜದಲ್ಲಿ ಶಿಕ್ಷಕರಿಗೆ ಇರುವ ಸ್ಥಾನಮಾನ ಯಾರಿಗೂ ಇಲ್ಲಾ ಶಿಕ್ಷಕರು ತಮ್ಮ ಸ್ಥಾನಮಾನಗಳಿಗೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.‌ ಇದೇ ಸಂದರ್ಭದಲ್ಲಿ ಮಸ್ಕಿ ಚರ್ಚ್ ಫಾಧರ್ಫಾ|| ಕ್ಷೇವಿಯರ್ ರವಿ,ರೋಪ್ಸೊ ಜಿಲ್ಲೆ ಅಧ್ಯಕ್ಷ ಶ್ರೀ ನಿವಾಸ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ, ವೆಂಕಟರೆಡ್ಡಿ ಹಾಲ...

"ಕಲ್ಯಾಣ ಕರ್ನಾಟಕ ಉತ್ಸವ: ಇತಿಹಾಸ ಮತ್ತು ಮಹತ್ವ"

ಇಮೇಜ್
ಕೊಟ್ಟೂರು ತಾಲೂಕು ಉಜ್ಜನಿ :-ಕಲ್ಯಾಣ ಕರ್ನಾಟಕ ಉತ್ಸವವು ಕರ್ನಾಟಕದ ಈಶಾನ್ಯ ಭಾಗದ (ಹಿಂದಿನ ಹೈದರಾಬಾದ್ ಕರ್ನಾಟಕ) ಸ್ವಾತಂತ್ರ್ಯ ಹೋರಾಟದ ಸ್ಮರಣಾರ್ಥವಾಗಿ ಆಚರಿಸುವ ವಾರ್ಷಿಕ ದಿನಾಚರಣೆಯಾಗಿದೆ.  ಬುಧವಾರದಂದು  ಭಾರತದ ಸ್ವಾತಂತ್ರ್ಯದ ನಂತರವೂ ನಿಜಾಮರ ಆಳ್ವಿಕೆಯಿಂದ ಮುಕ್ತರಾಗಲು ನಡೆದ ಹೋರಾಟದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತದೆ, ಮತ್ತು ಇಂದು (ಸೆಪ್ಟೆಂಬರ್ 17, 2025) ಇದರ 77ನೇ ವಾರ್ಷಿಕೋತ್ಸವವಾಗಿದೆ. ಸರ್  ಕೊಟ್ಟೂರು ತಾಲೂಕು ಉಜ್ಜಿನಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ವಿಮೋಚನಾ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬಿ ಚೌಡಪ್ಪ ಇವರು ಧ್ವಜಾರೋಹಣವನ್ನು ನೇರವೇರಿಸಿದರು.  ಗ್ರಾಮ ಪಂಚಾಯತಿ ಸರ್ವ ಸದಸ್ಯರುಗಳು ಸಿಬ್ಬಂದಿ  ವರ್ಗದವರು ಹಾಜರಿದ್ದರು

"ಅನಾಥಾಶ್ರಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ನರೇಂದ್ರ ಮೋದಿ ಜನ್ಮದಿನ ಆಚರಣೆ "

ಇಮೇಜ್
*ದೇಶ ಧರ್ಮ ಪರಂಪರೆಯ ಉಳಿವಿಗಾಗಿ ಕಂಕಣಕಟ್ಟಿನಿಂತ ಮಹಾ ನಾಯಕ ನರೇಂದ್ರ ದಾಮೋದರ್ ದಾಸ್ ಮೋದಿಯವರ ಅರ್ಥಪೂರ್ಣ ಜನ್ಮದಿನ ಆಚರಣೆ ಮಾಡಿದರು* ಕೊಟ್ಟೂರು : ಧರ್ಮಕ್ಕೆ ಆಪತ್ತು ಬಂದಾಗ ನಾನು ಹುಟ್ಟಿಬರುತ್ತೇನೆ ಎಂದು ಭಗವಂತ ಹೇಳಿರುವಂತೆ ನರೇಂದ್ರ ಮೋದಿಯವರನ್ನು ನೋಡಿದಾಗ ಆ ಭಗವಂತನೇ ನರೇಂದ್ರ ಮೋದಿಯವರ ರೂಪದಲ್ಲಿ ಬಂದು ಧರ್ಮ ರಕ್ಷಣೆ ಹಾಗೂ ದೇಶ ರಕ್ಷಣೆ ಮಾಡುತ್ತಿದ್ದಾರೆ ಎಂದು ಕೊಟ್ಟೂರು ನಗರ ಘಟಕ ಅಧ್ಯಕ್ಷ ರಾದ ಪಂಪಾಪತಿ ಅಂಗಡಿ ಹೇಳಿದರು ಅವರು ಇಲ್ಲಿನ ರುದ್ರಮ್ಮ ಅನಾಥ ಆಶ್ರಮ ದಲ್ಲಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುತ ಬಿಜೆಪಿ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಾತನಾಡಿದರು ಪಟ್ಟಣ ಪಂಚಾಯತ್ ಸದಸ್ಯರಾದ ಬೋರ್ ವೆಲ್ ತಿಪ್ಪೇಸ್ವಾಮಿ ಮಾತನಾಡಿ ನರೇಂದ್ರ ಮೋದಿ ನಾಯಕತ್ವದಿಂದ ದೇಶ ಶಕ್ತಿಶಾಲಿಯಾಗಿದೆ ಎಂದರು ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಿ ಸಿದ್ದಯ್ಯ. ಮಹಿಳಾ ಘಟಕ ಅಧ್ಯಕ್ಷೆ ಉಮಾ ದೇವರಮನಿ . ವಿಷ್ಣು ಮಣಿಕಂಠ ಮಾತನಾಡಿದರು ಕಾರ್ಯಕ್ರಮದಲ್ಲಿ ಪ್ರಧಾನಕಾರ್ಯದರ್ಶಿ ಅಭಿಷೇಕ್. ಬಿಜೆಪಿ ನಗರ ಘಟಕ ಉಪಾಧ್ಯರಾದ ಬಿ ಆರ್ ಕುಮಾರ್. ಪ್ರಸನ್ನ ಮೂಲಿಮನಿ. ರೈತ ಮೋರ್ಚಾ ಅಧ್ಯಕ್ಷ ಕೆಎಸ್ ರುದ್ರೇಶ್. ಕಾರ್ಯದರ್ಶಿ ಚಂದ್ರು.ವಿನಾಯಕ. ಬಸವರಾಜ್ C. ವಿಶ್ವನಾಥ್ ಬಿ ಎಸ್ . ಬಸವರಾಜ್ ಕೋನಪುರ್ ಕಲ್ಲೇಶ್. ಅರವಿಂದ್.ಸೂರಜ್ ನೆಲಕುದ್ರೆ ಜಗದೀಶ್.ರಾಣಾಮಲ್ ಜೈನ ಮಹಿಳಾ ಘಟಕದ ಶ್ರೀಮತಿ ಪ್ರೇಮಕ್ಕ ಮತ್ತು ಇತರರು...

*ಊಟದ ಜೋಳ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹ*

ಇಮೇಜ್
  ಕೊಟ್ಟೂರು ಸ 16: ಕೊಟ್ಟೂರು ತಾಲೂಕು ಕಾರ್ಯಾಲಯದ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರಮಣ್ಣನವರು ಊಟದ ಜೋಳ ಮೆಕ್ಕೆಜೋಳ ಖರೀದಿ ಕೇಂದ್ರ ಶೀಘ್ರದಲ್ಲಿ ತೆರೆಯಬೇಕು. ಕೊಟ್ಟೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಸಕ್ತ 2025-26ನೇ ಸಾಲಿನಲ್ಲಿ ಕೊಟ್ಟೂರು ತಾಲೂಕಿನ ರೈತರು ಊಟದ ಜೋಳ, ಮೆಕ್ಕೆಜೋಳ ಬೆಳೆದಿದ್ದು ಇಂದಿನ ವರ್ಷ ಸರ್ಕಾರದಿಂದ ರೂ 3370 ಬೆಂಬಲ ಬೆಲೆ ಖರೀದಿಸಿದ್ದು, ಆದರೆ ಈ ವರ್ಷ ಇನ್ನೂ ಖರೀದಿ ಕೇಂದ್ರ ತೆರೆದಿರುವುದಿಲ್ಲ. ಎಪಿಎಂಸಿ ಮಾರುಕಟ್ಟೆಯ ಖರೀದಿದಾರರು ಕ್ವಿಂಟಲ್ಲಿಗೆ 1500 ರಿಂದ 2000 ರೂ. ಬರೆಯುತ್ತಿರುವುದರಿಂದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದಾರೆ ಕಾರಣ ಕೂಡಲೇ ಖರೀದಿ ಕೇಂದ್ರ ತೆರೆದು ರೈತರು ಬೆಳೆದ ಊಟದ ಜೋಳ, ಮೆಕ್ಕೆಜೋಳ ಖರೀದಿಸಿ ಮತ್ತು ಕೊಟ್ಟೂರ ತಾಲೂಕಿನ ಈರುಳ್ಳಿ ಬೆಳೆಗಾರರಿಗೆ ಅನ್ಯಾಯವಾಗಿರುವುದನ್ನು ಗಮನಿಸಿ ಈರುಳ್ಳಿ ಬೆಳೆದ ರೈತರ ಹೊಲಕ್ಕೆ ಗ್ರಾಮ ಲೆಕ್ಕಾಧಿಕಾರಿಗಳ ಕಳುಹಿಸಿ ಸರ್ಕಾರಕ್ಕೆ ವರದಿ ಒಪ್ಪಿಸಿ ಒಂದು ಎಕ್ಕರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದರ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಎನ್ ಭರಮಣ್ಣ ಹಾಗೂ ಶ್ರೀಧರ ಎಸ್ ಒಡೆಯರ್ ತಾಲೂಕು ಅಧ್ಯಕ್ಷರು ಹಾಗೂ ಸಂಘದ ಸದಸ್ಯರುಗಳು ಹಾಗೂ ರೈತ ಮುಖಂಡರು ಗ್ರೇಡ್ 2 ತಹಸಿಲ್ದಾರರ ಮೂಲಕ ಮಾನ್ಯ ಜಿಲ್ಲಾಧಿಕಾರಿಗೆ ಮನವಿ...